BREAKING : ‘ಶ್ರೀಕಾಂತ್ ಪೂಜಾರಿ’ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ :  ರಾಮಜನ್ಮಭೂಮಿ ಹೋರಾಟಗಾರ  ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು  ಈ ಹಿಂದೆ ಬಿಜೆಪಿ 7-8 ವರ್ಷ ಅಧಿಕಾರದಲ್ಲಿತ್ತು, ಆಗ ಯಾಕೆ ಬಿಜೆಪಿ ಸರ್ಕಾರ ಈ ಕೇಸ್ ವಾಪಸ್ ಪಡೆಯಲಿಲ್ಲ. ನಾನು ಕೂಡ ಈ ಹಿಂದೆ ಕೇಸ್ ಹಿಂಪಡೆಯುವ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾಕೆ ಈ ಪ್ರಕರಣವನ್ನು ಹಿಂಪಡೆಯುವ ಪ್ರಯತ್ನ ಮಾಡಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರ ಬಂದಾಗ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಚುನಾವಣೆಯನ್ನು ಗೆಲ್ಲುವ ಹುನ್ನಾರ ನಡೆಸುತ್ತಿದೆ ಎಂದು ಜಗದೀಶ್ ಶೆಟ್ಟರ್     ಆರೋಪಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read