ಪ್ರಜ್ವಲ್ ರೇವಣ್ಣನಿಂದ ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ವಿಡಿಯೋ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಈ ರೀತಿ ಮಾಡಿದ್ದಾರೆ. ರೆ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಮಹಿಳಾ ಆಯೋಗ ದೂರು ನೀಡಿದ್ದು, ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಎಸ್ಐಟಿ ಕ್ರಮ ಕೈಗೊಳ್ಳುತ್ತದೆ. ಇದು ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು, ಗೃಹಸಚಿವರು ಎಸ್ಐಟಿ ರಚಿಸಿದ್ದಾರೆ. ಎಸ್ಐಟಿ ತನಿಖೆ ನಡೆಸಲಿದೆ. ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಇದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read