BIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ತನಿಖಾಧಿಕಾರಿಗಳಿಂದ ಹೇಳಿಕೆ ದಾಖಲು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ.

ಇಂದು ಇಡೀ ದಿನ ದಾಖಲೆಗಳ ಸಮೇತ ತನಿಖಾಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಎಲ್ಲಾ ಪ್ರಮುಖ ಸಾಕ್ಷಿಗಳು ಕೂಡ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿವೆ.

ಎಸ್ ಪಿಪಿ ಬಿ.ಎನ್ ಜಗದೀಶ್, ಅಶೋಕ್ ನಾಯ್ಕ್ ರಿಂದ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ತನಿಖಾದಿಕಾರಿಗಳ ಪಾಟಿಸವಾಲಿಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಜೂನ್ 28ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read