BIG NEWS : ಶ್ರೀಗಳದ್ದೇ ಈ ರೀತಿ ಕೊಲೆಯಾದರೆ ರಾಜ್ಯದ ಜನರ ಪರಿಸ್ಥಿತಿಯೇನು? ಗೃಹ ಸಚಿವರಿಗೆ MLC ಪ್ರಕಾಶ್ ಹುಕ್ಕೇರಿ ಪ್ರಶ್ನೆ

ಬೆಳಗಾವಿ: ನಂದಿಪರ್ವತ ಆಶ್ರಮದಲ್ಲಿ ಜೈನಮುನಿ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಸ್ವಾಮೀಜಿಯವರದ್ದೇ ಈ ರೀತಿ ಹತ್ಯೆಯಾದರೆ ಇನ್ನು ರಾಜ್ಯದ ಜನರ ಸ್ಥಿತಿ ಏನು? ಎಂದು ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ಪ್ರಶ್ನಿಸಿದ್ದಾರೆ.

ಬೆಳಗಾವಿಯ ಹಿರೆಕೋಡಿಯ ನಂದಿಪರ್ವತ ಆಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ಹುಕ್ಕೇರಿ, ಜೈನಮುನಿಗಳ ಹತ್ಯೆ ಖಂಡನೀಯ. ಶ್ರೀಗಳದ್ದೇ ಈ ರೀತಿ ಹತ್ಯೆಯಾದರೇ ಇನ್ನು ರಾಜ್ಯದ ಜನರ ಪರಿಸ್ಥಿತಿ ಏನು? ನಾಳೆ ಜನರಿಗೆ ಏನು ರಕ್ಷಣೆ ಕೊಡುತ್ತೀರಿ? ಎಂದು ಗೃಹಸಚಿವರಿಗೆ ಕೇಳಿದ್ದೇನೆ ಎಂದಿದ್ದಾರೆ.

ಘಟನೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಪಡೆದು ಸೋಮವಾರ ಹೇಳಿಕೆ ಕೊಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read