BREAKING: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಸಂಚುಕೋರ ಅತೀಕ್ ಅಹಮ್ಮದ್ ಅರೆಸ್ಟ್

ನವದೆಹಲಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ.

ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಅತೀಕ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟವರಲ್ಲಿ ಅತೀಕ್ ಅಹಮದ್ 21ನೇ ಆರೋಪಿ ಆಗಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬಂಧಿಸಿದೆ. ಜುಲೈ 2022 ರಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸದಸ್ಯರಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ನನ್ನು ಬರ್ಬರವಾಗಿ ಕೊಂದ ಪ್ರಕರಣದಲ್ಲಿ ಅತೀಕ್ ಅಹ್ಮದ್ 21 ನೇ ಆರೋಪಿಯಾಗಿದ್ದಾನೆ.

ಅತೀಕ್, ಪಿಎಫ್‌ಐ ನಾಯಕತ್ವದ ಅಡಿಯಲ್ಲಿ, ಪ್ರಕರಣದ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಜನರಲ್ಲಿ ಭಯ ಮತ್ತು ಕೋಮು ಗಲಭೆಯನ್ನು ಪ್ರಚೋದಿಸಲು ಪಿಎಫ್‌ಐ ಅಜೆಂಡಾದ ಭಾಗವಾಗಿ ನಡೆಸಿದ ಕೊಲೆಯನ್ನು ಮುಸ್ತಫಾ ಯೋಜಿಸಿ ಕಾರ್ಯಗತಗೊಳಿಸಿದ್ದ.

ದಾಳಿಯ ನಂತರ, ಮುಸ್ತಫಾ ಪರಾರಿಯಾಗಿದ್ದನು ಮತ್ತು ಅತೀಕ್ ಆತನನ್ನು ಚೆನ್ನೈಗೆ ಕಳಿಸುವುದು ಸೇರಿದಂತೆ ಆತ ಪರಾರಿಯಾಗಲು ಸಹಕಾರ ನೀಡಿದ್ದ. ಮೇ 2024 ರಲ್ಲಿ ಮುಸ್ತಫಾನನ್ನು ಬಂಧಿಸುವವರೆಗೂ ತಪ್ಪಿಸಿಕೊಳ್ಳಲು ಅವರು ಸಹಾಯ ಮಾಡಿದ್ದ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read