BIG NEWS: ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆಗೆ ಪ್ರೀತಂ ಗೌಡ ಟಾಂಗ್

ಹಾಸನ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಆದ ಗತಿಯೇ ವಿಜಯೇಂದ್ರಗೂ ಆಗಲಿದೆ ಎಂಬ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆಗೆ ಕಿಡಿಕಾರಿರುವ ಮಾಜಿ ಶಾಸಕ ಪ್ರೀತಂ ಗೌಡ, ಹರಕೆಯ ಕುರಿ ಯಾರು ಎಂಬುದು ಮುಂದೆ ಗೊತ್ತಾಗುತ್ತೆ ಎಂದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಪ್ರೀತಂ ಗೌಡ, ಯಡಿಯೂರಪ್ಪನವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ವಿಜಯೇಂದ್ರ ಕೂಡ ನಾಲ್ಕು ಬಾರಿ ಮುಖ್ಯಂತ್ರಿಯಾಗುತ್ತಾರೆ. ಅಶ್ವಮೇಧ ಯಾಗದ ಕುದುರೆ ಕಟ್ಟಲಾಗಿದೆ. ಹರಕೆಯ ಕುರಿ ಯಾರು ಎನ್ನುವುದು ಮುಂದೆ ಗೊತ್ತಾಗಲಿದೆ ಎಂದು ಟಾಂಗ್ ನೀಡಿದ್ದಾರೆ.

ವಿಜಯೇಂದ್ರ ಶಕ್ತಿ, ತಂತ್ರಗಾರಿಕೆ ಏನು ಎಂಬುದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದೆ. ಕಾಲಕ್ರಮೇಣ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read