ಬೆಲೆ ಏರಿಕೆ ವಿರೋಧಿಸಿ ಅಹೋರಾತ್ರಿ ಬಿಜೆಪಿ ಹೋರಾಟ: ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರ ವಾಸ್ತವ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ, ರಾಜ್ಯ ಸರ್ಕಾರದ ನಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಿದೆ.

ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಕಹಳೆ ಮೊಳಗಿಸಲಾಗಿದ್ದು, ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರು ವಾಸ್ತವ್ಯ ಹೂಡಿದ್ದಾರೆ. ಇಂದು ಮಧ್ಯಾಹ್ನದವರೆಗೆ ಹೋರಾಟ ಮುಂದುವರೆಯಲಿದೆ.

ಬುಧವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಗುರುವಾರ ಮಧ್ಯಾಹ್ನದವರೆಗೂ ಹೋರಾಟ ನಡೆಸಲಾಗುವುದು. ಇದೇ ತಿಂಗಳ 8ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read