BREAKING : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ‘ಇಸ್ರೋ’ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯೇದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ. ಶಂಕರನ್ ಮತ್ತು ಇಸ್ಟ್ರಾಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರಿಗೆ ಮಾತ್ರ ಪ್ರಧಾನಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ.ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಂಗಳೂರು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ

ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಚಂದ್ರಯಾನ-3ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಅಸಾಧಾರಣ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಎದುರುನೋಡುತ್ತಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read