BREAKING: ಮಾಜಿ ವಿದ್ಯಾರ್ಥಿ ಹಚ್ಚಿದ್ದ ಬೆಂಕಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಾಂಶುಪಾಲೆ ವಿಧಿವಶ

ತನ್ನ ಮಾಜಿ ವಿದ್ಯಾರ್ಥಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಕಾರಣಕ್ಕೆ ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶದ ಇಂದೋರ್ ನ ಖಾಸಗಿ ಕಾಲೇಜು ಪ್ರಾಂಶುಪಾಲೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಬಿ ಎಂ ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲೆ 54 ವರ್ಷದ ವಿಮುಕ್ತ ಶರ್ಮಾ ಮೃತಪಟ್ಟವರಾಗಿದ್ದು, ಫೆಬ್ರವರಿ 20ರಂದು ಇವರ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾತ್ಸವ್ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ಶೇಕಡ 90ರಷ್ಟು ಸುಟ್ಟ ಗಾಯಗಳೊಂದಿಗೆ ವಿಮುಕ್ತ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಮೃತಪಟ್ಟಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಅಶುತೋಷ್ ಪುಂಡಾಟಿಕೆಯಲ್ಲಿ ತೊಡಗಿದ್ದ ಕಾರಣ ಪ್ರಾಂಶುಪಾಲರು ಅವನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇ ಈ ಘೋರ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read