BREAKING: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವು

ಮೈಸೂರು: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ.

ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಡಿಸೆಂಬರ್ 28ರಂದು ಕಿಕ್ ಗಾಗಿ ಎಸೆನ್ಸ್ ಸೇವಿಸಿದ್ದರು.

ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ನಾಗರಾಜ್ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ನಾಗರಾಜ್ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಕಾರಾಗೃಹದಲ್ಲಿದ್ದರು. ಮತ್ತೊಬ್ಬ ಕೈದಿ ರಮೇಶ್ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read