ಸಾವರ್ಕರ್ ಫೋಟೋ ತೆರವು ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಸಿಎಂ, ಡಿಸಿಎಂ

ಬೆಳಗಾವಿ: ಅನುಮತಿ ಸಿಕ್ಕರೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಅಳವಡಿಸಿದ ಸಾವರ್ಕರ್ ಫೋಟೋ ತೆಗೆದು ಹಾಕಲು ನಾನೇ ಸಿದ್ದವಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಸದನ ಮತ್ತು ವಿಧಾನಸಭೆಯ ಅಧ್ಯಕ್ಷರಿಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸದನವು ಸಭಾಧ್ಯಕ್ಷರ ಸ್ವತ್ತು. ಈ ವಿಚಾರದಲ್ಲಿ ನಾನು ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read