ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದವರಿಗೆ ತಕ್ಕ ಶಾಸ್ತಿ

ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಅಪರಾಧಿಗಳಿಗೆ ತಲಾ ಎಂಟು ವರ್ಷ ಜೈಲು ಶಿಕ್ಷೆ ವಿಧಿಸಿ 71ನೇ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಆರ್.ಟಿ. ನಗರದ ಶೇಖ್ ರಿಯಾಜುದ್ದೀನ್ ಮೊಹಮ್ಮದ್ ಮತ್ತು ಎಸ್.ಎಸ್. ದೇವಿದಾಸ್ ಶಿಕ್ಷೆಗೊಳಗಾದವರು. 71ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಾಲಚಂದ್ರ ಭಟ್ ತೀರ್ಪು ನೀಡಿದ್ದಾರೆ. ಸಂತ್ರಸ್ತೆ ಪರವಾಗಿ ಸರ್ಕಾರಿ ಅಭಿಯೋಜಕ ಹೆಚ್.ಆರ್. ಸತ್ಯವತಿ ವಾದ ಮಂಡಿಸಿದ್ದರು.

ಲೈವ್ ಬ್ಯಾಂಡ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಿಮಾಚಲ ಪ್ರದೇಶ, ಪಂಜಾಬ್ ಯುವತಿಯರಿಗೆ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದರು. ಆರ್.ಟಿ. ನಗರದ ಮನೆಯಲ್ಲಿ ಯುವತಿಯರನ್ನು ಕೂಡಿ ಹಾಕಿ ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read