ಸಾರ್ವಜನಿಕರ ಗಮನಕ್ಕೆ : ಇನ್ಮುಂದೆ ‘QR ಕೋಡ್’ ಸ್ಕ್ಯಾನ್ ಮಾಡಿ ನೀವು ಪೊಲೀಸರಿಗೆ ದೂರು ನೀಡಬಹುದು

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ.

ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಹಿಂಜರಿಯುವುದು ಸಾಮಾನ್ಯ. ಹಾಗಾಗಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ‘ ಲೋಕ ಸ್ಪಂದನ’ ಎಂಬ ಕ್ಯೂ ಆರ್ ಕೋಡ್ ಆ್ಯಪ್ ಗಳನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಇದನ್ನು ಸ್ಕ್ಯಾನ್ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.

ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಟ್ವೀಟ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ. QR ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿದೆ. ಇದರಿಂದ ನಾವು ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/CPBlr/status/1678587889620504576?ref_src=twsrc%5Etfw%7Ctwcamp%5Etweetembed%7Ctwterm%5E1678587889620504576%7Ctwgr%5E58be27a169586a08ac1ba9b4b338a383bc40f472%7Ctwcon%5Es1_&ref_url=https%3A%2F%2Fvistaranews.com%2Fkarnataka%2Fpolice-department-bbmp-set-up-qr-code-for-lodging-complaints%2F393712.html

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read