‘ಸ್ಪೂರ್ತಿ ದಿನ’ವಾಗಿ ಪುನೀತ್ ರಾಜಕುಮಾರ್ ಜನ್ಮದಿನ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಜನ್ಮದಿನವನ್ನು ಅಭಿಮಾನಿಗಳು ಸ್ಪೂರ್ತಿ ದಿನವಾಗಿ ಆಚರಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಪುನೀತ್ ಬರ್ತಡೇ ಹಿನ್ನೆಲೆಯಲ್ಲಿ ‘ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ’ ಎನ್ನುವ ಪುನೀತ್ ಮಾತನ್ನು ಘೋಷವಾಕ್ಯ ಹೊಂದಿರುವ ಸಿಡಿಪಿ ಬಿಡುಗಡೆ ಮಾಡಲಾಗಿದೆ.

ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕಕ್ಕೆ ಅಭಿಮಾನಿಗಳು ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಪುನೀತ್ ಸ್ಮಾರಕದಿಂದ ಪ್ರಸನ್ನ ಚಿತ್ರಮಂದಿರದವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ರಕ್ತದಾನ ಶಿಬಿರ, ನೇತ್ರದಾನ ಜಾಗೃತಿ, ಅನ್ನ ಸಂತರ್ಪಣೆ ಕೈಗೊಳ್ಳಲಾಗಿದೆ. ಮೈಸೂರಿನ ಅಗ್ರಹಾರದಲ್ಲಿ ಪುನೀತ್ ರಾಜಕುಮಾರ್ ಅವರ 49 ಅಡಿ ಎತ್ತರ ಕಟೌಟ್ ನಿರ್ಮಿಸಲಾಗಿದೆ.

ಮತ್ತೊಂದೆಡೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಜಾಕಿ’ ಸಿನಿಮಾ ಮರು ಬಿಡುಗಡೆಯಾಗಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 14 ವರ್ಷಗಳ ನಂತರ ಬಿಡುಗಡೆಯಾದ ‘ಜಾಕಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಇನ್ನು ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರತಿ ವರ್ಷವೂ ಅವರ ಸಿನಿಮಾ ಮರು ಬಿಡುಗಡೆ ಮಾಡುವುದಾಗಿ ಕೆ.ಆರ್.ಜಿ. ಸ್ಟುಡಿಯೋಸ್ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read