ಅಮೃತಸರ: ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್ಪ್ರೀತ್ ತೂಫಾನ್ನ್ನು ಪಂಜಾಬ್ನ ಅಜ್ನಾಲಾ ನ್ಯಾಯಾಲಯವು ಬಿಡುಗಡೆ ಮಾಡಲು ಆದೇಶಿಸಿದ ನಂತರ ಅಮೃತಸರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಅಮೃತಪಾಲ್ ಸಿಂಗ್ ಬೆಂಬಲಿಗರು ಕತ್ತಿಮತ್ತು ಬಂದೂಕುಗಳನ್ನು ಝಳಪಿಸುತ್ತಾ, ಬ್ಯಾರಿಕೇಡ್ಗಳನ್ನು ಭೇದಿಸಿ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದ ಸಂದರ್ಭದಲ್ಲಿ ಕೆಲವು ಗೂಂಡಾಗಳು ಕತ್ತಿಯಿಂದ ವ್ಯಕ್ತಿಯ ಬೆರಳುಗಳನ್ನು ಕತ್ತರಿಸುವ ವಿಡಿಯೋ ವೈರಲ್ ಆಗಿದೆ.
ಪಂಜಾಬ್ನಿಂದ ಬಂದಿರುವ ವಿಡಿಯೋವನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಪೋಸ್ಟ್ ಮಾಡಿದ್ದಾರೆ. ಅವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ನಂತರ, ಜನರು ಇದನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.
ಪಂಜಾಬ್ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯ ಬಗ್ಗೆ ಹಲವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಗುರುವಾರ ಸ್ವಯಂ-ಶೈಲಿಯ ಬಂದೂಕು ದಾಳಿಯ ಸಿಖ್ ಬೋಧಕ ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರು ಗುರುವಾರ ಕತ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದು ಪೊಲೀಸರೊಂದಿಗೆ ಘರ್ಷಣೆ ಮಾಡಿದಾಗ ಅಪರಾಧ ಎಸಗಲಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಈಗಾಗಲೇ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗಿದ್ದು, ದುಷ್ಕರ್ಮಿಗಳನ್ನು ಗುರುತಿಸಿದ ನಂತರ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
FIR No.21 dated 09.02.2023 u/s 326, 365, 379 B, 34 IPC & 25 Arms Act is already registered in PS PH-1, District SAS Nagar.The victim and the accused had old enmity.
2 accused have been identified.They will nabbed soon.
All are requested to not spread rumours.#ActionAgainstCrime pic.twitter.com/HwiwABmT6C— SAS NAGAR POLICE (@sasnagarpolice) February 24, 2023