BIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುನಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹಾಗೂ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹಿಂದೆ ರಾಜ್ಯದಲ್ಲಿದ್ದ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು. ಇದೀಗ ಬೆಳಗಾವಿ ಬೆಂಕಿ ಜ್ವಾಲೆಯಾಗಿ ದುಬೈವರೆಗೆ ಹೋಗಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಬ್ಬರಲ್ಲ ಮೂವರು ಮುಖ್ಯಮಂತ್ರಿಗಳಿದ್ದಾರೆ. ರಾಜ್ಯದ ಅವನತಿಗೆ ಇದೆಲ್ಲವೂ ಕಾರಣವಾಗಲಿದೆ. ಮುಂದೆ ಅವರು ಯಾವ್ಯಾವ ದಿಕ್ಕಿನಲ್ಲಿ ಹೋಗುತ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read