ದುಷ್ಕರ್ಮಿಗಳಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ

ದಾವಣಗೆರೆ: ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು‌ ಇಂದು ಭೇಟಿ ನೀಡಿ ಘಟನೆಯ ವಿವರ ಪಡೆದು ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಿದ್ದಾರೆ.

ಮೇ 24 ರಂದು ಚನ್ನಗಿರಿ ಪೊಲೀಸ್ ಠಾಣೆಗೆ ಉದ್ರಿಕ್ತರ ಗುಂಪು ತಡರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಕೆಲವು ಮಂದಿ ಪೊಲೀಸರು ಗಾಯಗೊಂಡಿದ್ದರು. ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಸರ್ಕಾರ ಪೊಲೀಸ್ ಅಧಿಕಾರಿಗಳನ್ನೆ ಅಮಾನತುಗೊಳಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಠಾಣೆ ಮೇಲೆ ದಾಳಿ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕೃರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ರಘುಪತಿ ಭಟ್ ಅವರು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read