ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಅವರಿಗೆ ಅಭಿನಂದನೆಗಳು. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದ ರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ. ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read