BREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

ರಾಯಚೂರು: ರಾಯಚೂರು ತಾಲೂಕಿನ ಫತ್ತೇಪುರ ಗ್ರಾಮದ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಶವ ಪತ್ತೆಯಾಗಿದೆ.

ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಬಸವರಾಜ್(33) ಅವರ ಶವ ಪತ್ತೆಯಾಗಿದೆ. ಸೆ. 3ರಂದು ರಾತ್ರಿ ಹಳ್ಳ ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬಸವರಾಜ್ ಕೊಚ್ಚಿ ಹೋಗಿದ್ದರು. ಫತ್ತೆಪುರದಿಂದ ಸುಮಾರು ಒಂದೂವರೆ ಕಿಲೋಮೀಟರ್ ದೂರದಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ಎನ್.ಡಿ.ಆರ್.ಎಫ್., ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ನಿರಂತರ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ.

ವೆಂಕಟಾಪುರ ನಿವಾಸಿಯಾಗಿರುವ ಬಸವರಾಜ್ ರಾಯಚೂರಿನ HDFC ಬ್ಯಾಂಕ್ ಶಾಖೆಯಲ್ಲಿ ಕಲೆಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಅವಘಡ ನಡೆದಿತ್ತು. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read