SHOCKING NEWS: 45 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆ

ರಾಯಚೂರು: ಹೊಲಕ್ಕೆ ಹೋಗಿದ್ದ ವ್ಯಕ್ತಿ 45 ದಿನಗಳ ಹಿಂದೆ ಏಕಾಏಕಿ ನಾಪತ್ತೆಯಾದವರು ಇದೀಗ ಅಸ್ಥಿಪಂಜರವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ.

ಕೊರ್ತಕುಂದ ಗ್ರಾಮದ ರಸೂಲ್ ಸಾಬ್ (45) ಮೃತ ದುರ್ದೈವಿ. 45 ದಿನಗಳ ಹಿಂದೆ ಹೊಲಕ್ಕೆಂದು ಹೋದ ರಸೂಲ್ ಸಾಬ್ ಏಕಾಏಕಿ ನಾಪತೆಯಾಗಿದ್ದರು. ಕುಟುಂಬದವರು ಅವರಿಗಾಗಿ ಹುಡುಕಾಟ ನಡೆಸಿ ಕೊನೆಗೂ ಬೇರೆ ದಾರಿ ಕಾಣದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದೀಗ ಕೊರ್ತಕುಂದ ಗ್ರಾದ ಹೊರಭಾಗದ ದರ್ಗಾಬಳಿ ತಲೆ ಬುರುಡೆಯೊಂದು ಪತ್ತೆಯಾಗಿದೆ. ಈ ಬಗ್ಗೆ ತಿಳಿದ ಪೊಲೀಸರು ದೇಹಕ್ಕಾಗಿ ಹುಡುಕಾಟ ನಡೆಸಿದಾಗ ಬೆಟ್ಟದ ಮೇಲೆ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಚಪ್ಪಲಿ, ಬುರುಡೆ ಮೇಲಿನ ಕೂದಲು, ಬಟ್ಟೆ ಪರಿಶೀಲನೆ ನಡೆಸಿದಾಗ ಅದು ನಾಪತ್ತೆಯಾಗಿದ್ದ ರಸೂಲ್ ಸಾಬ್ ಅಸ್ಥಿಪಂಜರ ಎಂಬುದು ತಿಳಿದುಬಂದಿದೆ.

ಕುಟುಂಬದವರು ರಸೂಲ್ ಸಾಬ್ ನನ್ನು ಯಾರೋ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read