ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ.

ಮೇ 1 ರಂದು ಕಲ್ಬುರ್ಗಿ, ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 64.5 ಮಿ.ಮೀ.ನಿಂದ 115.5 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೇ 2 ರಂದು ಕೊಡಗು, ಮಂಡ್ಯ, ಬೀದರ್, ಕೊಪ್ಪಳ, ರಾಯಚೂರಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ, 115.6 ಮಿಲಿಮೀಟರ್ ನಿಂದ 204.5 ಮಿಲಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read