Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆಯಾಗಲಿದೆ..?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು. ಹಾಸನ, ಕೊಡಗು ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ನಿನ್ನೆ ಧರ್ಮಸ್ಥಳ, ಪಣಂಬೂರು, ಮಾಣಿ, ಮಂಗಳೂರು , ಕಳಸದಲ್ಲಿ ಮಳೆಯಾಗಿದ್ದು, ಬಿಸಿಲ ಬೇಗೆಗೆ ಹೈರಾಣಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read