ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ.

ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಶಿವಮೊಗ್ಗದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಮೇ 16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ವಿವಿಧ ಕಡೆ ಮಳೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read