ಪೆಟ್ರೋಲ್ ಬಂಕ್ ನಲ್ಲಿ ಮಳೆ ನೀರು ಮಿಶ್ರಿತ ಡೀಸೆಲ್ ಪೂರೈಕೆ: ಕೆಟ್ಟು ನಿಂತ ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ಮಳೆ ನೀರು ನುಗ್ಗಿದ್ದು, ನೀರು ಮಿಶ್ರಿತ ಡೀಸೆಲ್ ಹಾಕಿಸಿಕೊಂಡ ವಾಹನಗಳ ಸವಾರರಿಗೆ ಶಾಕ್ ಆಗಿದೆ.

ಹಳೆ ವಿಮಾನ ನಿಲ್ದಾಣ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ವಾಹನಗಳಿಗೆ ಮಳೆ ನೀರು ಮಿಶ್ರಿತ ಡೀಸೆಲ್ ಹಾಕಿದ್ದರಿಂದ 20 ಕ್ಕೂ ಅಧಿಕ ವಾಹನಗಳ ಇಂಜಿನ್ ಸೀಜ್ ಆಗಿ ಕೆಟ್ಟು ನಿಂತಿವೆ. ವಾಹನ ಮಾಲೀಕರು ಬಂಕ್ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಟ್ಟು ನಿಂತ ವಾಹನಗಳನ್ನು ರಿಪೇರಿ ಮಾಡಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read