ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 3-4 ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30- 40 ಕಿ.ಮೀ., ಒಳನಾಡು ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ಜೂನ್ 20 ಮತ್ತು 21 ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್ 20ರಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.