‘ಅತ್ಯಾಚಾರದಲ್ಲಿ ರಾಜಸ್ಥಾನ ನಂಬರ್ 1’ : ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ ವಜಾ

ನವದೆಹಲಿ: ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ.

ರಾಜಸ್ಥಾನದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಜಾಗೊಂಡ ನಂತರ, ರಾಜೇಂದ್ರ ಸಿಂಗ್ ಗುಧಾ ಅವರು ಸತ್ಯವನ್ನು ಮಾತನಾಡಿದ್ದಕ್ಕಾಗಿ ನನಗೆ ಶಿಕ್ಷೆಯಾಗಿದೆ ಎಂದು ಹೇಳಿದ್ದಾರೆ.
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವ ರೀತಿಯನ್ನು ನೋಡಿದ ನಂತರ, ಮಣಿಪುರದ ಬದಲಿಗೆ ನಾವು ನಮ್ಮಲ್ಲಿ ಏನಾಗುತ್ತಿದೆ ನೋಡಬೇಕು ಎಂದು ಹೇಳಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರನ್ನು ವಜಾಗೊಳಿಸಲಾಯಿತು. ಮಣಿಪುರದತ್ತ ಬೆರಳು ತೋರಿಸುವ ಬದಲು, ರಾಜಸ್ಥಾನ ಸರ್ಕಾರವು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ಮಾಜಿ ಸಚಿವರು ಒತ್ತಿ ಹೇಳಿದರು.

‘ನಾನು ಸರಿ ಎಂದು ಭಾವಿಸಿದ್ದನ್ನು ಹೇಳಿದೆ. ಅದನ್ನು ಹೇಳುವುದು ಅಪರಾಧವಲ್ಲ. ನನಗೆ ಸರಿ ಅನಿಸಿದ್ದನ್ನು ನಾನು ಹೇಳುತ್ತೇನೆ. ಈ ಸರ್ಕಾರವು ಸಂಖ್ಯಾಬಲದ ಬಿಕ್ಕಟ್ಟಿನಲ್ಲಿದ್ದಾಗ, ಈ ಸರ್ಕಾರವನ್ನು ಬಲಪಡಿಸಲು ನಾವು ಯಾವುದೇ ಅವಕಾಶವನ್ನು ಬಿಡಲಿಲ್ಲ. ವಾಸ್ತವವನ್ನು ಹೇಳಿದ್ದೇನಷ್ಟೆ. ಸತ್ಯ ಹೇಳಿದ್ದಕ್ಕೆ ನನಗೆ ಶಿಕ್ಷೆಯಾಗಿದೆ’ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read