BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಜಲಾವರ್: ಭಾನುವಾರ ಮುಂಜಾನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಅಕ್ಲೇರಾ ಪೊಲೀಸ್ ಠಾಣೆಯ ಬಳಿ ವೇಗವಾಗಿ ಬಂದ ಟ್ರಾಲಿ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಎಲ್ಲಾ ಸಂತ್ರಸ್ತರು ಮದುವೆ ಪಾರ್ಟಿಯಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಮೂಲಗಳ ಪ್ರಕಾರ, ಅವರೆಲ್ಲರೂ ಮಧ್ಯಪ್ರದೇಶದಿಂದ ತಮ್ಮ ಮನೆಗೆ ಮರಳುತ್ತಿದ್ದರು. ಪಚೋಲಾ ಬಳಿ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ.

ಅಕ್ಲೇರಾ ಪೊಲೀಸ್ ಠಾಣೆ ಪ್ರಭಾರಿ ಸಂದೀಪ್ ಬಿಷ್ಣೋಯ್ ಮಾತನಾಡಿ, ಡುಂಗರ್ ಗ್ರಾಮದ ಬಗ್ರಿ ಸಮುದಾಯಕ್ಕೆ ಸೇರಿದವರು ಶನಿವಾರ ಮಧ್ಯಪ್ರದೇಶಕ್ಕೆ ತಮ್ಮ ಸಂಬಂಧಿಕರ ವಿವಾಹ ಸಮಾರಂಭಕ್ಕೆ ತೆರಳಿದ್ದರು. ಅವರು ಹಿಂತಿರುಗುತ್ತಿದ್ದಾಗ, ವ್ಯಾನ್-ಟ್ರಾಲಿ ಡಿಕ್ಕಿ ಹೊಡೆದು ಒಂಬತ್ತು ಜನರ ಸಾವಿಗೆ ಕಾರಣವಾಯಿತು. ಮೃತರ ಶವಗಳನ್ನು ಅಕ್ಲೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ಅಪಘಾತದ ಬಗ್ಗೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read