‘ಬ್ಯಾಚುಲರ್ಸ್ ಪಾರ್ಟಿ’ ವಿವಾದ: ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.

ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಎಂಆರ್ ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ್ದರು. ನ್ಯಾಯ ಎಲ್ಲಿದೆ? ಹಾಗೂ ಗಾಳಿ ಮಾತು ಸಿನಿಮಾದ ಹಾಡುಗಳನ್ನು ಅನಧಿಕೃತವಾಗಿ ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾದಲ್ಲಿ ಬಳಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read