ಅಗ್ನಿಪಥ್ ಸೇನಾ ನೇಮಕಾತಿಗೆ `Rally’ : ಉಡುಪಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಉಡುಪಿ : ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ ಕೆಳಕಂಡ ಸ್ಥಳಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ.

 ಗೋವಿಂದ ಕಲ್ಯಾಣ ಮಂಟಪ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕನ ಹತ್ತಿರ ದೂ.ಸಂಖ್ಯೆ:-8660793549, ಅಂಬೇಡ್ಕ್ರ್ ಭವನ, ಆದಿಉಡುಪಿ – ದೂ.ಸಂಖ್ಯೆ:-9480843209,ನಾರಾಯಣಗುರು ಸಭಾ ಭವನ -ಬನ್ನಂಜೆ, ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಹತ್ತಿರ – ದೂ.ಸಂಖ್ಯೆ:-9481518767, ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪ (ಸಭಾ ಭವನ) ಅಂಬಲಪಾಡಿ – ದೂ.ಸಂಖ್ಯೆ-9742338533

 ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳು ಸಭಾ ಭವನದಲ್ಲಿ , ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡತಕ್ಕದ್ದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ವಾಸ್ತವ್ಯ ಹೂಡಬಾರದು. ಹೆಚ್ಚಿನ ಮಾಹಿತಿಗಾಗಿ 8296840456, 9148532284 ಮತ್ತು 9535052544 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವAತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read