BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ ಹೊಡೆದಿದೆ.

ಫಾರ್ಚೂನರ್ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಭೀಕರ ಅಪಘಾತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು, ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read