ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ HDK ಕಿಡಿ

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ರಾಮನಗರದ ಇತಿಹಾಸ ಅವರಿಗೆ ಗೊತ್ತಿದೆಯಯಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ರಾಮನಗರದ ಇತಿಹಾಸ ಗೊತ್ತಿದ್ದರೆ ಹೆಸರು ಬದಲಾವಣೆ ಮಾಡುತ್ತಿರಲಿಲ್ಲ. ರಾಮನಗರ ಜಿಲ್ಲೆಯ ಹೆಸರು ಇಟ್ಟಾಗ ಏಕೆ ವಿರೋಧಿಸಲಿಲ್ಲ? ವಿಧಾನಸಭೆಯಲ್ಲಿಯೂ ಅವರು ಮಾತನಾಡಲಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ಹೆಸರು ಬದಲಾವಣೆಗೆ ಅರ್ಜಿ ಕೊಟ್ಟವರು ಯಾರು? ಜಿಲ್ಲೆಯ ಹೆಸರು ಬದಲಿಸುವುದರಿಂದ ಏನು ಸಿಗುತ್ತದೆ? ರಾಮನಗರ ಈಗಾಗಲೇ ಅಭಿವೃದ್ಧಿಯಾಗಿದೆ. ಜಿಲ್ಲೆಯ ಹೆಸರು ಬದಲಿಸಿ ಭೂಮಿ ಬೆಲೆ ಹೆಚ್ಚಿಸಬೇಕಾ? ಕಾನೂನು ಮತ್ತು ಸುವ್ಯವಸ್ಥೆ ಹೇಗಿದೆ ನೋಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇಡದೆ ಏನು ಅಭಿವೃದ್ಧಿ ಮಾಡಿದರೆ ಏನು ಪ್ರಯೋಜನ ಬಂತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read