ಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್ ಜಾರಕಿಹೊಳಿ ಶಾಕ್…?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ರಮೇಶ್ ಜಾರಕಿಹೊಳಿಯವರೊಂದಿಗೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದು, ನಿಮ್ಮ ಪುತ್ರನನ್ನು ಗೋಕಾಕ್ ನಿಂದ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳಿ. ಚುನಾವಣಾ ರಾಜಕೀಯದಿಂದ ದೂರವಿರಿ ಎಂದು ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿದೆ.

ಆದರೆ ಇದಕ್ಕೆ ಒಪ್ಪದೇ, ಈ ಬಾರಿ ಕಣಕ್ಕೆ ಇಳಿಯಲೇಬೇಕು ಎಂದು ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿಯೇ ನಿವೃತ್ತಿ ಹೊಂದುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಹೀಗಾಗಿ ಗೋಕಾಕ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವೀಗ ಭಾರಿ ಕುತೂಹಲ ಮೂಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read