ಮಹತ್ವದ ರಾಜಕೀಯ ಬೆಳವಣಿಗೆ: ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.

ಶೆಟ್ಟರ್ ಅವರನ್ನು ಭೇಟಿಯಾದ ಬಗ್ಗೆ ರಮೇಶ್ ಜಾರಕಿಹೊಳೆ ಒಪ್ಪಿಕೊಂಡಿದ್ದಾರೆ. ನಂದಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ನಿಜ. ಶೆಟ್ಟರ್ ನಮ್ಮ ಪ್ರೀತಿಯ ವ್ಯಕ್ತಿ. ಅವರ ಬಗ್ಗೆ ಗೌರವ ಇದೆ. ಅವರು ಎಲ್ಲೇ ಇದ್ದರೂ ನಮ್ಮ ಹಿರಿಯರು. ನಾನು ಸತತವಾಗಿ ಆರು ಬಾರಿ ಅವರನ್ನು ಭೇಟಿಯಾಗಿದ್ದೇನೆ. ಆದರೆ ಈ ಬಾರಿ ಭೇಟಿಯಾಗಿರುವ ವಿಚಾರ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರನ್ನು ಅನೇಕ ಸಲ ಭೇಟಿಯಾಗಿದ್ದೇನೆ. ಅವರು ನಮ್ಮ ಪಕ್ಷ ಬಿಡಬಾರದಿತ್ತು. ನಮ್ಮ ಭೇಟಿಯ ವೇಳೆ ರಾಜಕೀಯ ವಿಚಾರವಾಗಿ ಒಂದು ಶಬ್ದ ಕೂಡ ಚರ್ಚೆಯಾಗಿಲ್ಲ. ವೈಯಕ್ತಿಕ ಭೇಟಿ ಅಷ್ಟೇ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಇತ್ತೀಚೆಗೆ ರಮೇಶ್ ಜಾರಕಿಹೊಳಿ -ಶೆಟ್ಟರ್ ಭೇಟಿ ವಿಚಾರ ಭಾರಿ ಚರ್ಚೆಯಾಗಿತ್ತು. ಆಪರೇಷನ್ ಹಸ್ತ ವದಂತಿಗಳ ನಡುವೆ ಬಿಜೆಪಿ ಶಾಸಕರ ಸಂಪರ್ಕದಲ್ಲಿರುವ ಶೆಟ್ಟರ್ ಕಾಂಗ್ರೆಸ್ ಗೆ ಸೆಳೆಯಲು ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read