ಬೆಳಗಾವಿ: ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು ಕಾಣಿಸಿಕೊಂಡಿದ್ದಾರೆ. ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮಿ ದೇವಿ ಜಾತ್ರೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಶಾಸಕ ರಮೇಶ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಲಕ್ಷ್ಮಿ ಭವನದಲ್ಲಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬರುವಿಕೆಗಾಗಿ ರಮೇಶ ಜಾರಕಿಹೊಳಿ ಅರ್ಧ ಗಂಟೆ ಕಾದು ಕುಳಿತಿದ್ದಾರೆ. ಮುಖಾಮುಖಿಯಾಗಿ ಅಕ್ಕ ಪಕ್ಕದಲ್ಲಿಯೇ ಕುಳಿತರೂ ಇಬ್ಬರು ಸಹೋದರರು ಮಾತನಾಡಿಲ್ಲ. ರಾಜಕೀಯ ಭಿನ್ನಾಭಿಪ್ರಾಯದಿಂದಾಗಿ ಸಹೋದರರು ದೂರವೇ ಉಳಿದಿದ್ದಾರೆ. ಗ್ರಾಮ ದೇವತೆಯ ಜಾತ್ರೆಯ ನಿಮಿತ್ತ ಅಧಿಕಾರಿಗಳು, ಸಾರ್ವಜನಿಕರ ಜೊತೆಗೆ ಸಭೆ ನಡೆಸಲಾಗಿದ್ದು, ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.