ಪಡಿತರ ಚೀಟಿದಾರರೇ ಗಮನಿಸಿ : ಹೆಸರು ಸೇರ್ಪಡೆ/ತಿದ್ದುಪಡಿಗೆ ನಾಳೆ ಸಂಜೆ 4 ಗಂಟೆಯವರೆಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಗಸ್ಟ್ 24 ರವರೆಗೆ ಅವಕಾಶ ನೀಡಿದೆ.

ಪಡಿತರ ಕಾರ್ಡುಗಳಲ್ಲಿ ಕುಟುಂಬದ ಮುಖ್ಯಸ್ಥರ ತಿದ್ದುಪಡಿ ಹಾಗೂ ಸದಸ್ಯರ ಸೇರ್ಪಡೆ ಕ್ರಮಕ್ಕೆ ಆಹಾರ ತಂತ್ರಾಂಶದಲ್ಲಿ ಆಗಸ್ಟ್ 24ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಿಎಸ್‌ಸಿ ಸೆಂಟರ್‌ಗಳಿಗೆ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.  ಈ ವರೆಗೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಹಾಗೂ ಸದಸ್ಯರು ಈ ತಿಂಗಳ ಅಂತ್ಯದವರೆಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read