ನಾಮಪತ್ರ ಪರಿಶೀಲನೆ ಹೊತ್ತಲ್ಲೇ ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್: ಕಾಂಗ್ರೆಸ್, ಆಪ್ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಕೆ

ಬೆಳಗಾವಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರಕ್ಕೆ ಕಾಂಗ್ರೆಸ್ ಮತ್ತು ಆಪ್ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ.

ರತ್ನಾ ಮಾಮನಿ ನಾಮಪತ್ರ ಸಿಂಧುತ್ವ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಅಫಿಡವಿಟ್ ಅಪ್ಲೋಡ್ ಮಾಡಲು ಅವಕಾಶ ಇದೆ. ನಾಮಪತ್ರ ಪರಿಶೀಲನೆಗೆ ಮೊದಲು ಅಪ್ಲೋಡ್ ಮಾಡಲು ಅವಕಾಶ ಇದೆ ಎಂದು ಸವದತ್ತಿ ಚುನಾವಣಾಧಿಕಾರಿ ಡಾ. ರಾಜೀವ ಕೂಲೇರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದಲ್ಲಿ 16 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಪರಿಶೀಲನೆ ವೇಳೆ ಎರಡು ಆಕ್ಷೇಪಣೆಗಳು ಬಂದಿದ್ದವು. ಆಕ್ಷೇಪಣೆಗಳ ವಿಚಾರಣೆಗೆ ನಾಮಪತ್ರ ಪರಿಶೀಲನೆ ಮುಂದೂಡಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ನಡೆಸುತ್ತೇವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರತ್ನ ಮಾಮನಿ ನಾಮಪತ್ರಕ್ಕೆ ಆಕ್ಷೇಪಣೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಾಪು ಗೌಡ ಆಕ್ಷೇಪಣೆ ಸಲ್ಲಿಸಿದ್ದಾರೆ. ಅಫಿಡವಿಟ್ ನಿಯಮ ಬದ್ಧವಾಗಿ ಇಲ್ಲ ಎಂದು ಆಕ್ಷೇಪಣೆ ಮಾಡಿದ್ದಾರೆ. ನಾಳೆ ಪರಿಶೀಲನೆ ನಡೆಸುತ್ತೇವೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read