ರಾಜ್ಯಾದ್ಯಂತ ಮಳೆ ತೀವ್ರ: ಭಾರೀ ಮಳೆ ಹಿನ್ನೆಲೆ 5 ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ, ಮಲೆನಾಡಿನಲ್ಲಿ ನಾಳೆ, ನಾಡಿದ್ದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 15ರಿಂದ 20 ಸೆಂ. ಮೀ. ಮಳೆಯಾಗುವ ಸಂಭವ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಹಾಸನ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read