ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಿಂದ ದರ್ಶನ್ ಸಹಚರರು ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಯಲಿನಲ್ಲಿರುವ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಮೂವರಿಗೆ ಜಾಮೀನು ಮಂಜೂರಾಗಿದ್ದರೂ ಬುಧವಾರ ಬಿಡುಗಡೆಯ ಭಾಗ್ಯ ದೊರೆತಿಲ್ಲ. ಬೆಂಗಳೂರಿನ ಗಿರಿನಗರದ ಅರ್. ಕೇಶವಮೂರ್ತಿ, ವಿ. ಕಾರ್ತಿಕ್ ಮತ್ತು ಬಿಜಿ ರಸ್ತೆಯ ಎಲ್. ನಿಖಿಲ್ ನಾಯಕ್ ಅವರಿಗೆ ಹೈಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ನೀಡಿತ್ತು.

ಜಾಮೀನು ಆದೇಶದ ಪ್ರತಿ ಸಿಗದ ಕಾರಣ ಬುಧವಾರ ಅವರು ಜೈಲಿನಿಂದ ಬಿಡುಗಡೆಯಾಗಬಹುದೆಂದು ಹೇಳಲಾಗಿತ್ತು. ಆದರೆ, ಬುಧವರಾವೂ ಆದೇಶ ಪ್ರತಿ ಸಿಗದ ಹಿನ್ನೆಲೆಯಲ್ಲಿ ಈ ಮೂವರು ಗುರುವಾರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read