BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ವೃಷಭಾವತಿ ನದಿಗೆ ಬಟ್ಟೆ ಎಸೆದು ಸಾಕ್ಷ ನಾಶ ಮಾಡಿದ್ದ ‘ಡಿ ಗ್ಯಾಂಗ್’..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಮಹತ್ವದ ಸಾಕ್ಷಿಗಳು ಪೊಲೀಸರಿಗೆ ಸಿಗುತ್ತಿದೆ.

ಕೊಲೆ ಮಾಡಿದ ಬಳಿಕ ಆರೋಪಿಗಳು ತಮ್ಮ ಬಟ್ಟೆಯನ್ನು ವೃಷಭಾವತಿ ನದಿಗೆ ಎಸೆದು ಸಾಕ್ಷ ನಾಶ ಮಾಡಿದ್ದರು. ಬಳಿಕ ಆರ್ ಆರ್ ನಗರದ ಟ್ರೆಂಡ್ಸ್ ನಲ್ಲಿ ಹೊಸ ಬಟ್ಟೆ ಖರೀದಿ ಮಾಡಿ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಳ್ಳಲು ಗಣಪತಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಕೂಡ ಸಲ್ಲಿಸಿದ್ದರು ಎಂದು ಹೇಳಲಾಗಿದೆ. ಸದ್ಯ ಈ 2 ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.ಕೇಸ್ ನ ರಿಪೋರ್ಟ್ ಸಿಕ್ಕಿದೆ. ಬೆಂಗಳೂರು ಎಫ್ಎಸ್ಎಲ್ ನಿಂದ ವರದಿ ಬಂದಿದೆ. ಇದೀಗ ಹೈದರಾಬಾದ್ ಎಫ್ಎಸ್ಎಲ್ ವರ್ದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read