BIG NEWS : ‘ನಟ ದರ್ಶನ್ & ಗ್ಯಾಂಗ್’ ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ..!

ಚಿತ್ರದುರ್ಗ : ನಟ ದರ್ಶನ್ & ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನವಾಗಿದೆ. ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದಾಗ ಸಹನಾ ಗರ್ಭಿಣಿಯಾಗಿದ್ದರು. ಸಹನಾ ಅವರು ಇಂದು ಬೆಳಗ್ಗೆ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಡಿ ಗ್ಯಾಂಗ್ ಜೂನ್ 8 ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ನಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಸದ್ಯ ಈ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಸೇರಿ ಆರು ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಗೆ ಕಠಿಣ ಶಿಕ್ಷೆ ಆಗಬೇಕೆಂದು ರೇಣುಕಾಸ್ವಾಮಿ ಪೋಷಕರು ಆಗ್ರಹಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read