BIG NEWS : ‘ವರ್ಗಾವಣೆಗೆ ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ’ : ಮಾಜಿ ಸಿಎಂ HDK ಸವಾಲ್

ಬೆಂಗಳೂರು : ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

ನಾನು ಸದನಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ್ರೆ ನನ್ನ ಅಧಿಕಾರದ ಅವಧಿಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡುತ್ತೀರಾ. ನನ್ನ ಕಾಲದಲ್ಲಿ ನಾನು ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದ್ದಾರೆ.ಪ್ರತಿಯೊಂದು ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆಯುತ್ತಿದೆ. ಅಧಿಕಾರಿಯೊಬ್ಬರು ನನಗೆ ಈ ಮಾಹಿತಿ ನೀಡಿದ್ದಾರೆ. ಕೇವಲ 2 ತಿಂಗಳಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ತಿಳಿಸಿದ್ದಾರೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read