Update : ಕಾಲೇಜಿನಲ್ಲಿ ‘ಜೈಶ್ರೀರಾಮ್’ ಹಾಡು ಹಾಕಿದ್ದಕ್ಕೆ ಗಲಾಟೆ ಕೇಸ್ : 17 ವಿದ್ಯಾರ್ಥಿಗಳ ವಿರುದ್ಧ ‘FIR’ ದಾಖಲು

ಬೀದರ್ : ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಬಶೀರ್ ಖಾನ್, ಶೇಕ್ ಪಾಷಾ, ಬಿಲಾಲ್, ಗಫರಾನ್ ಸೇರಿ 17 ಮಂದಿ ಅನ್ಯಕೋಮಿನ ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿದ್ಯಾರ್ಥಿ ನಟರಾಜ್ ನೀಡಿದ ದೂರಿನ ಮೇಲೆ ಎಫ್ ಐ ಆರ್ ದಾಖಲಾಗಿದೆ.s

ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಶುರುವಾದ ಗಲಾಟೆ ತಾರಕಕ್ಕೇರಿದ ಘಟನೆ ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ನಡೆದಿತ್ತು. ಕಾಲೇಜು ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದರು.
ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಹೊಡೆದಾಟದ ಮಟ್ಟಕ್ಕೆ ತಲುಪಿತ್ತು. ಘಟನೆ ನಡೆದ ಸ್ಥಳಕ್ಕೆ ಸಚಿವ ಈಶ್ವರ್ ಖಂಡ್ರೆ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read