ಡಿ.ಕೆ. ಬ್ರದರ್ಸ್ ಭದ್ರ ಕೋಟೆಯಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ ಭರ್ಜರಿ ರೋಡ್ ಶೋ

ರಾಮನಗರ: ಡಿ.ಕೆ. ಬ್ರದರ್ಸ್ ಕೋಟೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದ ಮಂಗಳವಾರಪೇಟೆಯಿಂದ ಗಾಂಧಿ ಭವನ ವೃತ್ತದ ವರೆಗೆ ರೋಡ್ ಶೋ ನಡೆದಿದೆ. ಸುಮಾರು 1.5 ಕಿಲೋಮೀಟರ್ ರೋಡ್ ಶೋ ನಡೆಸಿದ್ದು, ರಸ್ತೆಯುದ್ದಕ್ಕೂ ಅಪಾರ ಸಂಖ್ಯೆಯ ಜನ ಹಾಗೂ ಕಾರ್ಯಕರ್ತರು ಭಾಗಿಯಾಗಿ ಮೋದಿ, ಅಮಿತ್ ಶಾ ಪರ ಘೋಷಣೆ ಕೂಗಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ಅಮಿತ್ ಶಾ ರಣೋತ್ಸಾಹ ಮೂಡಿಸಿದ್ದಾರೆ. ಅಮಿತ್ ಶಾ ಅವರೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಆರ್. ಅಶೋಕ್, ಅಶ್ವತ್ಥ್ ನಾರಾಯಣ್, ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read