BREAKING : ಬೆಂಗಳೂರಲ್ಲಿ ‘RBI’ ಅಧಿಕಾರಿಗಳ ಸೋಗಿನಲ್ಲಿ ರಾಬರಿ : ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ರಾಬರಿ ನಡೆದಿದ್ದು, ಆರ್ ಬಿ ಎ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾದ ಘಟನೆ ಇಂದು ನಡೆದಿದೆ.

ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ನಾವು ಆರ್ ಬಿ ಐ ಅಧಿಕಾರಿಗಳು ಎಂದು ವಾಹನವನ್ನ ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನ ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ.

ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದ್ದಾರೆ. ಸದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read