ರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ತುಮಕೂರು: ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರುತಿ ಅಲಿಯಾಸ್ ಪೋಲಾರ್ಡ್(34) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಟ್ಟಿ ಮಂಜ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಾರುತಿ ಭಾಗಿಯಾಗಿದ್ದ. ನಿನ್ನೆ ರಾತ್ರಿ ಸ್ನೇಹಿತರ ಜೊತೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಹಿನ್ನೆಲೆ ಸ್ನೇಹಿತರೇ ಆತನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read