ಕಲಬುರಗಿ: ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.
ಅಕ್ಟೋಬರ್ 28ರಂದು ಎಲ್ಲಾ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸಿ, ಅದರ ವರದಿಯನ್ನು ಅಕ್ಟೋಬರ್ ೩೦ರಂದು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.
ಸರ್ಕಾರದ ಪರವಾಗಿ ಆನ್ ಲೈನ್ ಮೂಲಕ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ವಾದ ಮಾಂಡಿಸಿದ್ದಾರೆ, ಜಿಲ್ಲೆ ಹಾಗೂ ಚಿತ್ತಾಪುರ ಕಾನೂನು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಈ ಅರ್ಜಿ ವಿಚಾರಣೆಗಳ ಕುರ್ತಿತು ನಿರ್ಧರಿಸಲು ಇನ್ನೆರಡು ವಾರ ಸಮಯ ಕೇಳಿದರು. ಇದಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿ ದಾರರಪರ ವಕೀ;ಅ ಅರುಣ್ ಶ್ಯಾಮ್, ಕಾನೂನು ಸುವ್ಯವಸ್ಥೆ ಹೆಸರಲ್ಲಿ ಕಾಲಹರಣ ಮಾಡುವ ಕ್ರಮವಿದು. ಸಮಸ್ಯೆಯಾದರೆ ಕೇಂದ್ರ ಭದ್ರತಾಪಡೆಯ ನೆರವು ಪಡೆಯಲಿ ಎಂದು ವಾದಿಸಿದರು. ಈ ಹಿನ್ನೆಲೆಯಲ್ಲಿ ಶಾಂತಿ ಸಭೆ ನಡೆಸಿ ವರದಿ ನೀಡಲು ನ್ಯಾಯಾಲಯ ಸೂಚಿಸಿದೆ.
