BIG NEWS: ಸಂವಿಧಾನ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆದುಹಾಕಿ: RSS ನಾಯಕ ದತ್ತಾತ್ರೇಯ ಹೊಸಬಾಳೆ ಕರೆ

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿನ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದು ಹಾಕಬೇಕು. ಈ ಪದಗಳನ್ನು ಸೇರಿಸಿರುವುದನ್ನು ಪರಿಶೀಲಿಸಬೇಕೆಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಕರೆ ನೀಡಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ 50 ವರ್ಷಗಳ ನೆನಪಿಗಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೊಸಬಾಳೆ, ತುರ್ತು ಪರಿಸ್ಥಿತಿ ಹೇರಿದವರು ದೇಶಕ್ಕೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಅನ್ನು ನೇರವಾಗಿ ಹೆಸರಿಸದೆ, “ಇದನ್ನು ಮಾಡಿದವರು ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಅವರು ಅದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಿಲ್ಲ. ಅವರು ಕ್ಷಮೆಯಾಚಿಸಬೇಕು. ನಿಮ್ಮ ಪೂರ್ವಜರು ಹಾಗೆ ಮಾಡಿದ್ದರೆ, ಅವರ ಪರವಾಗಿ ಕ್ಷಮೆಯಾಚಿಸಿ.” ಅವರು ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಹೊಸಬಾಳೆ ಹೇಳಿದ್ದಾರೆ.

ಹೊಸಬಾಳೆ ಅವರು 1976 ರ 42 ನೇ ಸಾಂವಿಧಾನಿಕ ತಿದ್ದುಪಡಿಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದು, ಈ ಸಮಯದಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಪೀಠಿಕೆಗೆ ಸೇರಿಸಲಾಯಿತು. ಈ ಪದಗಳು ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಲಾದ ಮೂಲ ಪೀಠಿಕೆಯ ಭಾಗವಾಗಿರಲಿಲ್ಲ ಎಂದು ಅವರು ಗಮನಿಸಿದರು. “ಅವು ಉಳಿಯಬೇಕೆ ಅಥವಾ ಬೇಡವೇ ಎಂಬುದರ ಕುರಿತು ಚರ್ಚೆ ನಡೆಯಬೇಕು”. ಅಂದಿನಿಂದ ಈ ವಿಷಯವನ್ನು ಮರುಪರಿಶೀಲಿಸಲು ಯಾವುದೇ ಗಂಭೀರ ಪ್ರಯತ್ನ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read