ಸಿಐಡಿ ಅಧಿಕಾರಿ ತಳ್ಳಿ ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಪರಾರಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದಾನೆ. ರಾತ್ರಿ ಸಿಐಡಿ ಅಧಿಕಾರಿಯನ್ನು ತಳ್ಳಿದ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದು, ದೂರು ದಾಖಲಾಗಿದೆ.

ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣದ ಕಿಂಗ್ ಪಿನ್ ಆಗಿರುವ ರುದ್ರಗೌಡ ನಿನ್ನೆ ಕಲಬುರ್ಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ತುಮಕೂರು ಠಾಣೆಯಲ್ಲಿ ರುದ್ರಗೌಡ ವಿರುದ್ಧ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಬಂದಿದ್ದರು.

ಸಿಐಡಿ ಪಿಎಸ್ಐ ಆನಂದ್ ಅವರು ಪಾಟೀಲ್ ನನನ್ಉ ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಅವರನ್ನು ತಳ್ಳಿದ ಪರಾರಿಯಾಗಿದ್ದಾನೆ. ಈ ಬಗ್ಗೆ ಸಿಐಡಿ ಪಿಎಸ್ಐ ಆನಂದ್ ಕಲಬುರ್ಗಿ ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ ರುದ್ರಗೌಡ ಪಾಟೀಲನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಆತನನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಬಂದಿದ್ದರು. ಜಾಮೀನು ಪಡೆದ ಬಳೆಕ ರುದ್ರಗೌಡ ವಿಚಾರಣೆಗೆ ನಿರಂತರವಾಗಿ ಗೈರು ಹಾಜರಾಗಿದ್ದ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read