ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್

ಬೆಂಗಳೂರು: ಕೇರಳಧ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಘೇ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ನೇರವಾಘೀ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸೇವೆ ಆರಂಭಿಸಲಾಗುವುದು.

ಡಿ. 1 ರಿಂದ ಪ್ರತಿದಿನ ಬೆಂಗಳೂರು –ನಿಲಕಲ್(ಪಂಪಾ) ನಡುವೆ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸಂಚಾರ ಇರಲಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 1.50ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 6:45ಕ್ಕೆ ಪಂಪಾ ತಲುಪಲಿದೆ.

ಮತ್ತೊಂದು ಬಸ್ ನಿತ್ಯ ಸಂಜೆ 6 ಗಂಟೆಗೆ ಪಂಪಾದಿಂದ ಹೊರಟು ಮರುದಿನ 10 ಗಂಟೆಗೆ ಬೆಂಗಳೂರು ತಲುಪಲಿದೆ. 1600 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಅಥವಾ ಪ್ರಮುಖ ಬಸ್ ಡಿಪೋ ಗಳಲ್ಲಿ ಟಿಕೆಟ್ ಕೌಂಟರ್ ಗಳಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read