BIG BREAKING: ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್; ರೈಲ್ವೆ ಇಲಾಖೆ ಕರ್ತವ್ಯಕ್ಕೆ ಹಾಜರು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಕುಸ್ತಿಪಟುಗಳ ಹೋರಾಟದಿಂದ ಹಿಂದೆ ಸರಿದಿದ್ದಾರೆ.

ಕಳೆದ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಪ್ರಮುಖ ಕುಸ್ತಿಪಟುಗಳ ಮಾತುಕತೆ ಬಳಿಕ ಸಾಕ್ಷಿ ಮಲ್ಲಿಕ್ ಈ ತೀರ್ಮಾನಕ್ಕೆ ಬಂದಿದ್ದು, ಉತ್ತರ ರೈಲ್ವೆಯಲ್ಲಿ ತಮಗೆ ನೀಡಲಾಗಿದ್ದ ಉದ್ಯೋಗಕ್ಕೆ ಮರು ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳು ಹಲವು ದಿನಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದು, ಭಾನುವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read